
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಮತ್ತು ತಳಮಟ್ಟದಿಂದ ಸಂಘಟಿಸಲು ಗಟ್ಟಿ ಧ್ವನಿಯ ಹೋರಾಟಗಾರನ ಅಗತ್ಯವಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸುಹೈಲ್ ಕಂದಕ್ ಸೂಕ್ತ ಅಭ್ಯರ್ಥಿ ಎಂಬ ಅಭಿಪ್ರಾಯ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ವ್ಯಕ್ತವಾಗಿದೆ.

ಸುಹೈಲ್ ಕಂದಕ್


ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಹೈಲ್ ಕಂದಕ್ ಸೂಕ್ತ: ಕಾರ್ಯಕರ್ತರ ಒಕ್ಕೊರಲ ಬೆಂಬಲ!
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಹೈಲ್ ಕಂದಕ್ ಸೂಕ್ತ ಅಭ್ಯರ್ಥಿ: ಕಾರ್ಯಕರ್ತರ ಅಭಿಪ್ರಾಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಮತ್ತು ತಳಮಟ್ಟದಿಂದ ಸಂಘಟಿಸಲು ಗಟ್ಟಿ ಧ್ವನಿಯ ಹೋರಾಟಗಾರನ ಅಗತ್ಯವಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸುಹೈಲ್ ಕಂದಕ್ ಸೂಕ್ತ ಅಭ್ಯರ್ಥಿ ಎಂಬ ಅಭಿಪ್ರಾಯ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ವ್ಯಕ್ತವಾಗಿದೆ.
ತಮ್ಮ ವಿದ್ಯಾರ್ಥಿ ಜೀವನದಿಂದಲೇ ಕಾಂಗ್ರೆಸ್ ಸಿದ್ಧಾಂತದಲ್ಲಿ ತೊಡಗಿಸಿಕೊಂಡಿರುವ ಸುಹೈಲ್ ಕಂದಕ್, ವಿದ್ಯಾರ್ಥಿ ದೆಸೆಯಲ್ಲೇ ಅನೇಕ ಹೋರಾಟ ಮತ್ತು ಪ್ರತಿಭಟನೆಗಳನ್ನು ನಡೆಸಿ ಯುವಜನತೆಗೆ ಪ್ರೇರಣೆಯಾಗಿದ್ದಾರೆ. ತದನಂತರ ಯುವ ಕಾಂಗ್ರೆಸ್ನಲ್ಲಿ ಪ್ರಮುಖ ಹುದ್ದೆಗಳನ್ನು ವಹಿಸಿಕೊಂಡು, ತಮ್ಮ ಜವಾಬ್ದಾರಿಗೆ ತಕ್ಕಂತೆ ನ್ಯಾಯ ಒದಗಿಸುವ ಮೂಲಕ ಉತ್ತಮ ಹೆಸರು ಗಳಿಸಿದ್ದಾರೆ.
ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿ ಧ್ವನಿ:
ವಿದ್ಯಾಭ್ಯಾಸ, ಮಾತಿನ ಚಾತುರ್ಯ ಹಾಗೂ ಬರವಣಿಗೆಯ ಮೂಲಕವೇ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿರುವ ಸುಹೈಲ್ ಕಂದಕ್, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಮುಖ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸಿ ಪಕ್ಷ ಮತ್ತು ಸಿದ್ಧಾಂತದ ಪರವಾಗಿ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕಾಂಗ್ರೆಸ್ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು, ಸಂಘಟನೆಯ ಜವಾಬ್ದಾರಿ ವಹಿಸಿಕೊಳ್ಳಲು ಸಂಪೂರ್ಣ ಅರ್ಹರಾಗಿದ್ದಾರೆ.
ಯಾವುದೇ ಅನ್ಯಾಯ ಅಥವಾ ಅನೀತಿ ಎದುರಾದಾಗ ನೇರವಾಗಿ ಪ್ರಶ್ನಿಸುವ ಮತ್ತು ದಿಟ್ಟತನದಿಂದ ಎದುರಿಸುವ ಗುಣ ಅವರಲ್ಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಇಂತಹ ಹೋರಾಟಗಾರನ ಅಗತ್ಯವಿದ್ದು, ಸುಹೈಲ್ ಕಂದಕ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ ನೀಡಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಂಘಟನೆಗೆ ಹೊಸ ಬಲ ಸಿಗಲಿದೆ ಎಂಬುದು ಬೆಂಬಲಿಗರ ಹಾಗೂ ಸಾರ್ವಜನಿಕರ ಸ್ಪಷ್ಟ ನಿಲುವಾಗಿದೆ.
